ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸಬೇಕು- ಸಿಎಂ ಸಿದ್ದರಾಮಯ್ಯ

ನಾಡು, ನುಡಿಯ ವಿಷಯದಲ್ಲಿ ರಾಜಿಯಿರದ ಬದ್ಧತೆ ನನ್ನದು. ಕರ್ನಾಟಕ, ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಷಯದಲ್ಲಿ ನಾವು ಕೊಟ್ಟ ಮಾತಿಗೆ ತಪ್ಪದೆ ನುಡಿದಂತೆ ನಡೆಯುವವರು ಎಂಬುದನ್ನು ಮತ್ತೊಮ್ಮೆ ಸಾಧಿಸಿ ತೋರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಹಾಗೂ ಗ್ರಾಹಕ ಉತ್ಪನ್ನಗಳ ಮೇಲೆ ಅವುಗಳ ಹೆಸರು ಮತ್ತು ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರೆ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಿ ಆದೇಶಿಸಲಾಗಿದೆ ಎಂದು ಹೇಳಿದರು.

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ.

ಈ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

3 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

4 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

5 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

7 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

12 hours ago