ನಾಡು, ನುಡಿಯ ವಿಷಯದಲ್ಲಿ ರಾಜಿಯಿರದ ಬದ್ಧತೆ ನನ್ನದು. ಕರ್ನಾಟಕ, ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಷಯದಲ್ಲಿ ನಾವು ಕೊಟ್ಟ ಮಾತಿಗೆ ತಪ್ಪದೆ ನುಡಿದಂತೆ ನಡೆಯುವವರು ಎಂಬುದನ್ನು ಮತ್ತೊಮ್ಮೆ ಸಾಧಿಸಿ ತೋರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಹಾಗೂ ಗ್ರಾಹಕ ಉತ್ಪನ್ನಗಳ ಮೇಲೆ ಅವುಗಳ ಹೆಸರು ಮತ್ತು ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರೆ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಿ ಆದೇಶಿಸಲಾಗಿದೆ ಎಂದು ಹೇಳಿದರು.
ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ.
ಈ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…