ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಆದ್ಯತೆ- ಸಿಎಂ ಸಿದ್ದರಾಮಯ್ಯ

ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್‌ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್‌ ನಿರ್ಮಾಣಕ್ಕೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಲಾಗಿತ್ತು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದರು

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು, ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುವುದರಿಂದ, ಏಕರೂಪದ ಕ್ಯಾಲೆಂಡರ್‌ ಆಫ್‌ ಇವೆಂಟ್ಸ್‌ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು ಹಾಗೂ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಹೇಳಿದರು.

ಮೈಸೂರು ಮಹಾರಾಣಿ ಆರ್ಟ್ಸ್‌ ಕಾಲೇಜು ಹಾಸ್ಟೆಲ್‌ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್‌ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್‌ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸಲು ಸೂಕ್ತ ಕ್ರಮ ವಹಿಸಬೇಕು. ಇದಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳಬೇಕು. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದಿಡಬೇಕು ಎಂದು ಹೇಳಿದರು‌.

ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

“ಗುರಿ” ಇಟ್ಟ ದೊಡ್ಡಬಳ್ಳಾಪುರ ಪ್ರತಿಭೆ ಮಹಾನಿಧಿ

ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…

29 minutes ago

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

7 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

9 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

20 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

24 hours ago