ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಆದ್ಯತೆ- ಸಿಎಂ ಸಿದ್ದರಾಮಯ್ಯ

ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್‌ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್‌ ನಿರ್ಮಾಣಕ್ಕೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಲಾಗಿತ್ತು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದರು

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು, ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುವುದರಿಂದ, ಏಕರೂಪದ ಕ್ಯಾಲೆಂಡರ್‌ ಆಫ್‌ ಇವೆಂಟ್ಸ್‌ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು ಹಾಗೂ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಹೇಳಿದರು.

ಮೈಸೂರು ಮಹಾರಾಣಿ ಆರ್ಟ್ಸ್‌ ಕಾಲೇಜು ಹಾಸ್ಟೆಲ್‌ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್‌ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್‌ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸಲು ಸೂಕ್ತ ಕ್ರಮ ವಹಿಸಬೇಕು. ಇದಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳಬೇಕು. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದಿಡಬೇಕು ಎಂದು ಹೇಳಿದರು‌.

ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

8 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

12 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

20 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago