ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್ ನಿರ್ಮಾಣಕ್ಕೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಲಾಗಿತ್ತು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದರು
ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು, ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುವುದರಿಂದ, ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು ಹಾಗೂ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಹೇಳಿದರು.
ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸಲು ಸೂಕ್ತ ಕ್ರಮ ವಹಿಸಬೇಕು. ಇದಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳಬೇಕು. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದಿಡಬೇಕು ಎಂದು ಹೇಳಿದರು.
ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…