ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.
17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.
ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್…
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ (ACI) ನೀಡುವ ‘Best Airport on…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು,…
ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು,…
ಯುವಕರ ದಂಗೆ...... ನಿರುದ್ಯೋಗ ದಂಗೆ, ಕೆಪಿಎಸ್ಸಿ ಪರೀಕ್ಷಾ ಅಕ್ರಮ, ಎರಡೂವರೆ ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ ಇಲ್ಲ, ದೀರ್ಘಕಾಲದಿಂದ ಅತಿಯಾದ…
ಪಾದಚಾರಿಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಇಂದು ದೊಡ್ಡಬಳ್ಳಾಪುರದ ಶ್ಯಾಕಲದೇವನಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್ ಡಿಕ್ಕಿ ರಭಸಕ್ಕೆ ಪಾದಚಾರಿಗೆ ಸಣ್ಣಪುಟ್ಟ…