ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.
17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.
ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…