ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.
17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.
ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…