ಡಿ.ಕೆ ಶಿವಕುಮಾರ್ ಅವರನ್ನು ಮುಂದಿನ 2 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ ಅಧಿಕೃತವಾಗಿ ಡಿ.ಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿ.ಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ.
ಇನ್ನೊಂದೆಡೆ ನೂತನ ಸಿಎಂ ಪ್ರಮಾಣ ವಚನಕ್ಕೆ ದಿನಾಂಕ, ಸಮಯ ಕೂಡ ನಿಗದಿಯಾಗಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸ್ಥಾನಕ್ಕೆ ಗುರುವಾರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಶನಿವಾರ ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ನಾಯಕ ಆಯ್ಕೆ ನಡೆಯಿತು. ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಆಗಮಿಸಿ ಔಪಚಾರಿಕವಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಪಕ್ಷದ ಕಡೆಯಿಂದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05 ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…