Categories: ಲೇಖನ

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ…

ಹಿಂದೆಯೂ ಈ ರೀತಿಯ ಭಿನ್ನಾಭಿಪ್ರಾಯಗಳು ಇದ್ದವು. ಆಗಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಇದನ್ನು ಒಂದು ಹಂತಕ್ಕೆ ನಿಯಂತ್ರಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿರೇಕವನ್ನು ಮುಟ್ಟಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಸ್ಪೀಕರ್ ಅವರ ಹುದ್ದೆಯೂ ಸಹ ಇದೇ ರೀತಿ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ……

ಸಂವಿಧಾನದಲ್ಲಿ ಕಾನೂನುಗಳನ್ನು ಸ್ಪಷ್ಟವಾಗಿ ರಚಿಸಿದ್ದರೂ ಸಹ ” ವಿವೇಚನಾ ಅಧಿಕಾರ ” ಎಂಬ ಪದ ಎಲ್ಲವನ್ನೂ ಅವರವರ ದೃಷ್ಟಿಕೋನಕ್ಕೆ ತಕ್ಕಂತೆ ಬಳಸಿಕೊಂಡು ವಿವಾದಗಳನ್ನು ಸೃಷ್ಟಿಸಿಕೊಳ್ಳಲಾಗಿದೆ. ಹಾಗೆಯೇ ಪಕ್ಷಪಾತದ ತೀರ್ಮಾನಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ತೆಗೆದುಕೊಳ್ಳಲಾಗುತ್ತಿದೆ…..

ವಾಸ್ತವದಲ್ಲಿ ಜನರಿಂದ ಆಯ್ಕೆಯಾದ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಅಧಿಕಾರ ಇರುತ್ತದೆ. ಅವರು ಬಹುತೇಕ ಜನರಿಗೆ ಉತ್ತರದಾಯಿತ್ವ ಹೊಂದಿರುತ್ತಾರೆ. ಹಾಗೆಯೇ ಜನಪ್ರಿಯತೆಯ ನಡುವೆ ಕಾನೂನುಗಳು ಸಹ ಅಷ್ಟೇ ಮುಖ್ಯವಾಗುತ್ತದೆ. ಆ ಕಾನೂನುಗಳನ್ನು ಮೇಲ್ವಿಚಾರಣೆ ಮಾಡಲು ರಾಜ್ಯಪಾಲರನ್ನು ನೇಮಿಸಲಾಗಿರುತ್ತದೆ. ಎರಡು ಕೂಡ ತಮ್ಮ ತಮ್ಮ ಕರ್ತವ್ಯಗಳನ್ನು ಸರಿಯಾಗಿ ಮಾಡಿಕೊಂಡು ಹೋದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ರಾಜಕೀಯ ಪಕ್ಷಗಳು ಅಧಿಕಾರದ ದಾಹಕ್ಕೆ ಒಳಗಾಗಿ ಜನಪ್ರಿಯತೆಯನ್ನು, ಕಾನೂನನ್ನು ಅದಕ್ಕಾಗಿ ಬಳಸಿ ಕೊಂಡಾಗ ಈ ವಿವಾದ ಸೃಷ್ಟಿಯಾಗುತ್ತದೆ……

ಇಲ್ಲಿ ನಾವುಗಳು ಮುಕ್ತ ಮನಸ್ಸಿನಿಂದ ನೋಡಬೇಕಾಗಿರುವುದು ಜನಪ್ರಿಯತೆ ಅಥವಾ ಬಹುಮತವೇ ಅಂತಿಮ ಸತ್ಯವಲ್ಲ. ಒಂದು ಸರ್ಕಾರ ಜನಪ್ರಿಯವಾಗಿದೆ ಎಂದ ತಕ್ಷಣ ಐದು ವರ್ಷದ ಅವಧಿಯಲ್ಲಿ ತಮಗಿಷ್ಟ ಬಂದಂತೆ ಆಡಳಿತ ಮಾಡಲು ಸಾಧ್ಯವಿಲ್ಲ. ಅದಕ್ಕೆ ಕಾನೂನಿನ ಇತಿಮಿತಿಗಳು ಇದ್ದೇ ಇರುತ್ತದೆ. ಒಂದು ವ್ಯವಸ್ಥೆ ದೀರ್ಘಕಾಲ ಕ್ರಮಬದ್ಧವಾಗಿ ಮುನ್ನಡೆಯಲು ನೀತಿ ನಿಯಮಗಳು ಬೇಕೇ ಬೇಕು….

ಹಾಗೆಯೇ ನೀತಿ ನಿಯಮಗಳೇ ಸಂಪೂರ್ಣ ಪರಮಾಧಿಕಾರವೂ ಅಲ್ಲ. ನೀತಿ ನಿಯಮಗಳನ್ನು ರೂಪಿಸಿರುವುದು ಜನರ ಕಲ್ಯಾಣಕ್ಕಾಗಿಯೇ ಹೊರತು ನಿಯಮಗಳಿಗಾಗಿಯೇ ನಾವಿಲ್ಲ, ನಮಗಾಗಿ ನಿಯಮಗಳಿರುವುದು. ಆ ಕೆಲವು ಅಂಶಗಳನ್ನೇ ಉಪಯೋಗಿಸಿಕೊಂಡು ಬಹುಮತದಿಂದ ಆಯ್ಕೆಯಾದ ಸರ್ಕಾರಗಳಿಗೆ ತೊಂದರೆ ಕೊಡುವುದು ಕೂಡ ತಪ್ಪಾಗುತ್ತದೆ….

ಪಶ್ಚಿಮ ಬಂಗಾಳ, ದೆಹಲಿ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಹೀಗೆ ಹಲವಾರು ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಅಲ್ಲಿನ ಮುಖ್ಯಮಂತ್ರಿಗಳ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ನಿಜಕ್ಕೂ ಸಂವಿಧಾನದಲ್ಲಿ ಏನಾದರೂ ಲೋಪಗಳಿವೆಯೇ ಎಂದು ಪರಿಶೀಲಿಸಿದಾಗ ಖಂಡಿತ ಇಲ್ಲ, ಈ ವಿವಾದಗಳು ಕೃತಕ ಸೃಷ್ಟಿ. ಏಕೆಂದರೆ ಒಂದೇ ಪಕ್ಷದ ಆಡಳಿತಗಳು ಎರಡೂ ಕಡೆ ಇರುವಾಗ ಸಾಮಾನ್ಯವಾಗಿ ಯಾವುದೇ ವಿವಾದಗಳಾಗುವುದಿಲ್ಲ. ಎರಡು ವಿಭಿನ್ನ ಪಕ್ಷಗಳು ಆಯ್ಕೆಯಾದಾಗ ಮಾತ್ರ ಈ ಸಮಸ್ಯೆ ತಲೆದೋರುತ್ತದೆ. ಅಂದರೆ ಇದು ಬೇಕಂತಲೇ ಸಮಸ್ಯೆ ಉಂಟುಮಾಡುವ ಪ್ರಕ್ರಿಯೆಗಳು ಎಂಬುದು ಸ್ಪಷ್ಟವಾಗುತ್ತದೆ…..

ಮಾಧ್ಯಮಗಳು ಮತ್ತು ರಾಜಕೀಯ ಆಸಕ್ತರು ಇದನ್ನು ಸಮಗ್ರವಾಗಿ ನೋಡದೆ ಅವರು ಸರಿ ಇವರು ಸರಿ, ಅವರು ತಪ್ಪು ಇವರ ತಪ್ಪು ಎಂದು ವಿಮರ್ಶೆಗೆ ಇಳಿಯುತ್ತಾರೆ. ಇಲ್ಲಿ ಸರಿ ತಪ್ಪುಗಳ ಪ್ರಶ್ನೆಯೇ ಬರುವುದಿಲ್ಲ. ಇವೆಲ್ಲವೂ ಉದ್ದೇಶಪೂರ್ವಕ ಚಟುವಟಿಕೆಗಳು. ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ತುಂಬಾ ಅಪರಿಚಿತರು ಅಥವಾ ಶತ್ರುಗಳೇನು ಅಲ್ಲ. ಈಗಿನ ಕಾಲದಲ್ಲಿ ಸಂಪರ್ಕದ ಕೊರತೆಯೂ ಇರುವುದಿಲ್ಲ. ಯಾವಾಗ ಬೇಕಾದರೂ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕುಳಿತು, ಚರ್ಚಿಸಿ, ಮಾತನಾಡಿ ವಿವಾದ ಬಗೆಹರಿಸಿಕೊಳ್ಳಬಹುದು ಅಥವಾ ನೈತಿಕ ಮತ್ತು ಕಾನೂನಿನ ಜವಾಬ್ದಾರಿ ನಿರ್ವಹಿಸಬಹುದು. ಆದರೆ ಅದು ಸಾಧ್ಯವಾಗುತ್ತಿಲ್ಲ. ಬೇಕಂತಲೇ ತೊಂದರೆ ಕೊಡುತ್ತಾರೆ……

ಇಂತಹ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ತುಂಬಾ ಕಷ್ಟ. ಏಕೆಂದರೆ ಸಮಸ್ಯೆಯೇ ಇಲ್ಲದ ಕಡೆ ಸಮಸ್ಯೆಯನ್ನು ಹುಟ್ಟು ಹಾಕಲಾಗುತ್ತದೆ….

ಇಲ್ಲಿ ನಾವು ಮುಖ್ಯವಾಗಿ ಚರ್ಚಿಸಬೇಕಾಗಿರುವುದು ಪ್ರಜಾಪ್ರಭುತ್ವದ ಯಶಸ್ಸಿನ ಮಾನದಂಡಗಳು ಮತ್ತು ಗುಣಮಟ್ಟ. ಎಲ್ಲಿ ಬುದ್ದಿವಂತ, ಪ್ರಾಮಾಣಿಕ ಮತದಾರರು ಮತ್ತು ಚುನಾವಣಾ ಅಭ್ಯರ್ಥಿಗಳು ಇರುತ್ತಾರೋ ಅಲ್ಲಿ ಸಹಜವಾಗಿಯೇ ಪ್ರಜಾಪ್ರಭುತ್ವ ಉತ್ತಮ ಗುಣಮಟ್ಟ ಹೊಂದಿರುತ್ತದೆ. ಆದರೆ ಎಲ್ಲಿ ವ್ಯಕ್ತಿಗಳು ಅಥವಾ ಮತದಾರರು ಮತ್ತು ಅಭ್ಯರ್ಥಿಗಳು ಅಪ್ರಬುದ್ಧ, ಅಪ್ರಾಮಾಣಿಕ, ಅದಕ್ಷ, ಭ್ರಷ್ಟ, ಧರ್ಮಾಂಧ, ಜಾತಿವಾದಿಗಳು ಇರುತ್ತಾರೋ ಅಲ್ಲಿ ಪ್ರಜಾಪ್ರಭುತ್ವ ಕೆಳಹಂತಕ್ಕೆ ಇಳಿಯುತ್ತದೆ…..

ಸಮಸ್ಯೆಯ ಮೂಲ ಇರುವುದೇ ಇಲ್ಲಿ. ಆದ್ದರಿಂದಲೇ ಒಂದು ದೇಶದ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ವ್ಯಕ್ತಿಗಳ ಗುಣಮಟ್ಟ ಉತ್ತಮವಾಗಿರಬೇಕು, ಅಂದರೆ ಮೌಲ್ಯಯುತವಾಗಿರಬೇಕು. ನಮ್ಮೆಲ್ಲ ಕಾರ್ಯಯೋಜನೆಗಳು, ಚಿಂತನೆಗಳು, ವ್ಯಕ್ತಿತ್ವ ನಿರ್ಮಾಣದ ಕಡೆಗಿರಲಿ ಎಂದು ಆಶಿಸುತ್ತಾ……

ಆಗ ಮಾತ್ರ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಅಭಿವೃದ್ಧಿ ಹೊಂದಿ ಜನರ ಜೀವನಮಟ್ಟ ಸುಧಾರಿಸಬಹುದು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 hours ago