ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31 ಸಾವಿರ, ದ್ವಿತೀಯ-21 ಸಾವಿರ ಹಾಗೂ ತೃತೀಯ-11 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.
ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.
ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್,ಜೆಎಸ್ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ.ನಿಂಬಾಳ್ಕರ್ ಮತ್ತಿತರರು ಇದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…