ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31 ಸಾವಿರ, ದ್ವಿತೀಯ-21 ಸಾವಿರ ಹಾಗೂ ತೃತೀಯ-11 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.

ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.

ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್,ಜೆಎಸ್‍ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ‌.ನಿಂಬಾಳ್ಕರ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

59 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago