ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31 ಸಾವಿರ, ದ್ವಿತೀಯ-21 ಸಾವಿರ ಹಾಗೂ ತೃತೀಯ-11 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.
ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.
ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್,ಜೆಎಸ್ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ.ನಿಂಬಾಳ್ಕರ್ ಮತ್ತಿತರರು ಇದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…