ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31 ಸಾವಿರ, ದ್ವಿತೀಯ-21 ಸಾವಿರ ಹಾಗೂ ತೃತೀಯ-11 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.

ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.

ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್,ಜೆಎಸ್‍ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ‌.ನಿಂಬಾಳ್ಕರ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 hour ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago