ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2ಸಾವಿರ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.
ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.
ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…