ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2‌ಸಾವಿರ ಬಿಡುಗಡೆ ಮಾಡಲು‌ ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಲೂಕಿನ ಕೋಡಿಹಳ್ಳಿ, ಸೊಣಪನಹಳ್ಳಿ ಬಳಿ ಇಂದು ಸಂಜೆ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ರೈತರು ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳನ್ನು ಸಮೀಕ್ಷೆ ಮಾಡಿ ಮಾತನಾಡಿದ ಅವರು, ನೂತನವಾಗಿ ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಸರ್ಕಾರದ ಬಳಿ ಹಣವಿಲ್ಲ. ಸದ್ಯ ಈ ಹಿಂದೆ ಜಿಜೆಪಿ ವತಿಯಿಂದ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ಆಗಿದ್ದವೋ ಅದರಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಅಷ್ಟೇ ಎಂದರು.

ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು‌ ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗುತ್ತಿದ್ದಾರೆ. ರೈತರ ಸಹಾಯಕ್ಕೆ ಬಾರದ ಸರ್ಕಾರ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೋಡಿನರಸಿಂಹಮೂರ್ತಿ ತಾಲ್ಲೂಕಿನ ರೈತರ ಕಷ್ಟಗಳ ಬಗ್ಗೆ ಮಾಹಿತಿ ನೀಡಿ, ಕೃಷಿ ಪಂಪ್ಸೆಟ್ಗಳಿಗೆ ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ₹25 ಸಾವಿರ ಹಣ ಪಾವತಿ ಮಾಡಿದರೆ ವಿದ್ಯುತ್ ಪರಿವರ್ತಕ, ಕಂಬಗಳು, ತಂತಿ  ಸೇರಿದಂತೆ ಎಲ್ಲಾವನ್ನು ಬೆಸ್ಕಾಂ ವತಿಯಿಂದ ನೀಡಲಾಗುತಿತ್ತು. ಆದರೆ ಈಗ ರೈತರು ಸುಮಾರು ₹2 ಲಕ್ಷ ಖರ್ಚು ಮಾಡುವಂತಾಗಿದ್ದು, ಈ ನೀತಿ ಬದಲಾಗಬೇಕು. ರೈತರು ಮುಂಗಾರು ಹಂಗಾಮಿನಲ್ಲಿ ಮಾಡಿರುವ ಬೆಳೆ ಸಾಲ ಮನ್ನಾಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago