ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2‌ಸಾವಿರ ಬಿಡುಗಡೆ ಮಾಡಲು‌ ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಲೂಕಿನ ಕೋಡಿಹಳ್ಳಿ, ಸೊಣಪನಹಳ್ಳಿ ಬಳಿ ಇಂದು ಸಂಜೆ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ರೈತರು ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳನ್ನು ಸಮೀಕ್ಷೆ ಮಾಡಿ ಮಾತನಾಡಿದ ಅವರು, ನೂತನವಾಗಿ ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಸರ್ಕಾರದ ಬಳಿ ಹಣವಿಲ್ಲ. ಸದ್ಯ ಈ ಹಿಂದೆ ಜಿಜೆಪಿ ವತಿಯಿಂದ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ಆಗಿದ್ದವೋ ಅದರಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಅಷ್ಟೇ ಎಂದರು.

ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು‌ ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗುತ್ತಿದ್ದಾರೆ. ರೈತರ ಸಹಾಯಕ್ಕೆ ಬಾರದ ಸರ್ಕಾರ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೋಡಿನರಸಿಂಹಮೂರ್ತಿ ತಾಲ್ಲೂಕಿನ ರೈತರ ಕಷ್ಟಗಳ ಬಗ್ಗೆ ಮಾಹಿತಿ ನೀಡಿ, ಕೃಷಿ ಪಂಪ್ಸೆಟ್ಗಳಿಗೆ ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ₹25 ಸಾವಿರ ಹಣ ಪಾವತಿ ಮಾಡಿದರೆ ವಿದ್ಯುತ್ ಪರಿವರ್ತಕ, ಕಂಬಗಳು, ತಂತಿ  ಸೇರಿದಂತೆ ಎಲ್ಲಾವನ್ನು ಬೆಸ್ಕಾಂ ವತಿಯಿಂದ ನೀಡಲಾಗುತಿತ್ತು. ಆದರೆ ಈಗ ರೈತರು ಸುಮಾರು ₹2 ಲಕ್ಷ ಖರ್ಚು ಮಾಡುವಂತಾಗಿದ್ದು, ಈ ನೀತಿ ಬದಲಾಗಬೇಕು. ರೈತರು ಮುಂಗಾರು ಹಂಗಾಮಿನಲ್ಲಿ ಮಾಡಿರುವ ಬೆಳೆ ಸಾಲ ಮನ್ನಾಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

4 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago