ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2‌ಸಾವಿರ ಬಿಡುಗಡೆ ಮಾಡಲು‌ ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಲೂಕಿನ ಕೋಡಿಹಳ್ಳಿ, ಸೊಣಪನಹಳ್ಳಿ ಬಳಿ ಇಂದು ಸಂಜೆ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ರೈತರು ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳನ್ನು ಸಮೀಕ್ಷೆ ಮಾಡಿ ಮಾತನಾಡಿದ ಅವರು, ನೂತನವಾಗಿ ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಸರ್ಕಾರದ ಬಳಿ ಹಣವಿಲ್ಲ. ಸದ್ಯ ಈ ಹಿಂದೆ ಜಿಜೆಪಿ ವತಿಯಿಂದ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ಆಗಿದ್ದವೋ ಅದರಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಅಷ್ಟೇ ಎಂದರು.

ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು‌ ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗುತ್ತಿದ್ದಾರೆ. ರೈತರ ಸಹಾಯಕ್ಕೆ ಬಾರದ ಸರ್ಕಾರ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೋಡಿನರಸಿಂಹಮೂರ್ತಿ ತಾಲ್ಲೂಕಿನ ರೈತರ ಕಷ್ಟಗಳ ಬಗ್ಗೆ ಮಾಹಿತಿ ನೀಡಿ, ಕೃಷಿ ಪಂಪ್ಸೆಟ್ಗಳಿಗೆ ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ₹25 ಸಾವಿರ ಹಣ ಪಾವತಿ ಮಾಡಿದರೆ ವಿದ್ಯುತ್ ಪರಿವರ್ತಕ, ಕಂಬಗಳು, ತಂತಿ  ಸೇರಿದಂತೆ ಎಲ್ಲಾವನ್ನು ಬೆಸ್ಕಾಂ ವತಿಯಿಂದ ನೀಡಲಾಗುತಿತ್ತು. ಆದರೆ ಈಗ ರೈತರು ಸುಮಾರು ₹2 ಲಕ್ಷ ಖರ್ಚು ಮಾಡುವಂತಾಗಿದ್ದು, ಈ ನೀತಿ ಬದಲಾಗಬೇಕು. ರೈತರು ಮುಂಗಾರು ಹಂಗಾಮಿನಲ್ಲಿ ಮಾಡಿರುವ ಬೆಳೆ ಸಾಲ ಮನ್ನಾಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago