ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2ಸಾವಿರ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.
ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.
ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…