ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2‌ಸಾವಿರ ಬಿಡುಗಡೆ ಮಾಡಲು‌ ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಲೂಕಿನ ಕೋಡಿಹಳ್ಳಿ, ಸೊಣಪನಹಳ್ಳಿ ಬಳಿ ಇಂದು ಸಂಜೆ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ರೈತರು ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳನ್ನು ಸಮೀಕ್ಷೆ ಮಾಡಿ ಮಾತನಾಡಿದ ಅವರು, ನೂತನವಾಗಿ ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಸರ್ಕಾರದ ಬಳಿ ಹಣವಿಲ್ಲ. ಸದ್ಯ ಈ ಹಿಂದೆ ಜಿಜೆಪಿ ವತಿಯಿಂದ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ಆಗಿದ್ದವೋ ಅದರಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಅಷ್ಟೇ ಎಂದರು.

ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು‌ ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗುತ್ತಿದ್ದಾರೆ. ರೈತರ ಸಹಾಯಕ್ಕೆ ಬಾರದ ಸರ್ಕಾರ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೋಡಿನರಸಿಂಹಮೂರ್ತಿ ತಾಲ್ಲೂಕಿನ ರೈತರ ಕಷ್ಟಗಳ ಬಗ್ಗೆ ಮಾಹಿತಿ ನೀಡಿ, ಕೃಷಿ ಪಂಪ್ಸೆಟ್ಗಳಿಗೆ ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ₹25 ಸಾವಿರ ಹಣ ಪಾವತಿ ಮಾಡಿದರೆ ವಿದ್ಯುತ್ ಪರಿವರ್ತಕ, ಕಂಬಗಳು, ತಂತಿ  ಸೇರಿದಂತೆ ಎಲ್ಲಾವನ್ನು ಬೆಸ್ಕಾಂ ವತಿಯಿಂದ ನೀಡಲಾಗುತಿತ್ತು. ಆದರೆ ಈಗ ರೈತರು ಸುಮಾರು ₹2 ಲಕ್ಷ ಖರ್ಚು ಮಾಡುವಂತಾಗಿದ್ದು, ಈ ನೀತಿ ಬದಲಾಗಬೇಕು. ರೈತರು ಮುಂಗಾರು ಹಂಗಾಮಿನಲ್ಲಿ ಮಾಡಿರುವ ಬೆಳೆ ಸಾಲ ಮನ್ನಾಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

6 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

10 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

10 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

12 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

13 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

16 hours ago