ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2‌ಸಾವಿರ ಬಿಡುಗಡೆ ಮಾಡಲು‌ ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಲೂಕಿನ ಕೋಡಿಹಳ್ಳಿ, ಸೊಣಪನಹಳ್ಳಿ ಬಳಿ ಇಂದು ಸಂಜೆ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ರೈತರು ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳನ್ನು ಸಮೀಕ್ಷೆ ಮಾಡಿ ಮಾತನಾಡಿದ ಅವರು, ನೂತನವಾಗಿ ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಲು ಸರ್ಕಾರದ ಬಳಿ ಹಣವಿಲ್ಲ. ಸದ್ಯ ಈ ಹಿಂದೆ ಜಿಜೆಪಿ ವತಿಯಿಂದ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ಆಗಿದ್ದವೋ ಅದರಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಅಷ್ಟೇ ಎಂದರು.

ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು‌ ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗುತ್ತಿದ್ದಾರೆ. ರೈತರ ಸಹಾಯಕ್ಕೆ ಬಾರದ ಸರ್ಕಾರ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೋಡಿನರಸಿಂಹಮೂರ್ತಿ ತಾಲ್ಲೂಕಿನ ರೈತರ ಕಷ್ಟಗಳ ಬಗ್ಗೆ ಮಾಹಿತಿ ನೀಡಿ, ಕೃಷಿ ಪಂಪ್ಸೆಟ್ಗಳಿಗೆ ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ₹25 ಸಾವಿರ ಹಣ ಪಾವತಿ ಮಾಡಿದರೆ ವಿದ್ಯುತ್ ಪರಿವರ್ತಕ, ಕಂಬಗಳು, ತಂತಿ  ಸೇರಿದಂತೆ ಎಲ್ಲಾವನ್ನು ಬೆಸ್ಕಾಂ ವತಿಯಿಂದ ನೀಡಲಾಗುತಿತ್ತು. ಆದರೆ ಈಗ ರೈತರು ಸುಮಾರು ₹2 ಲಕ್ಷ ಖರ್ಚು ಮಾಡುವಂತಾಗಿದ್ದು, ಈ ನೀತಿ ಬದಲಾಗಬೇಕು. ರೈತರು ಮುಂಗಾರು ಹಂಗಾಮಿನಲ್ಲಿ ಮಾಡಿರುವ ಬೆಳೆ ಸಾಲ ಮನ್ನಾಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago