ರಾಜ್ಯಶಾಸ್ತ್ರ ಕೆ-ಸೆಟ್ /ನೆಟ್ ಕಾರ್ಯಾಗಾರ: ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈ-  ಪ್ರಾಧ್ಯಾಪಕ ಡಾ.ಸುರೇಂದ್ರ ಕುಮಾರ್

ದೊಡ್ಡಬಳ್ಳಾಪುರ: ಯಾವ ಪರೀಕ್ಷೆಯೂ ಅಸಾಧ್ಯವಲ್ಲ. ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈಗಳು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕುಮಾರ್ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಕೇಂದ್ರ ಹಾಗೂ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆ-ಸೆಟ್ /ನೆಟ್ ರಾಜ್ಯಶಾಸ್ತ್ರ ಪತ್ರಿಕೆಯ ಕಾರ್ಯಾಗಾರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು, ದೊಡ್ಡ ಕನಸುಗಳನ್ನು ಇಟ್ಟುಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಆಸಕ್ತಿಯಿಂದ, ಪ್ರೀತಿಯಿಂದ ಮತ್ತು ಕೌತುಕದಿಂದ ಓದಿದರೆ ಅದೇ ನಿಮ್ಮ ಶಕ್ತಿ ಆಗುತ್ತದೆ. ಕೆ-ಸೆಟ್ ಅಥವಾ ನೆಟ್ ಪರೀಕ್ಷೆಗಳು ಕೇವಲ ಒಂದು ಪ್ರಮಾಣ ಪತ್ರವಲ್ಲ , ಅದು ನಿಮ್ಮ ಶೈಕ್ಷಣಿಕ ಪಯಣದಲ್ಲಿ ನಿಜವಾದ ಜ್ಞಾನಪರಿಚಯದ ಹಂತವಾಗಿದೆ.  ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಶಾಸ್ತ್ರವು ಕೇವಲ ರಾಜಕೀಯವನ್ನು ತಿಳಿಸುವ ವಿಷಯವಲ್ಲ; ಅದು ಸಮಾಜದ ಬದಲಾವಣೆಯ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಿಂದ ಪಡೆಯುವ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಪ್ರಾಧ್ಯಾಪಕ ಶ್ರೀಕಾಂತ್ ಹಂದ್ರಾಳ, ಡಾ. ಈರಣ್ಣ ಅವರು ಭಾಗವಹಿಸಿ, ಕೆ-ಸೆಟ್ ಮತ್ತು ನೆಟ್ ಪರೀಕ್ಷೆಗಳ ಪಠ್ಯಕ್ರಮ, ತಯಾರಿ ವಿಧಾನ ಹಾಗೂ ಪಠ್ಯಕ್ರಮದ ವಿಶ್ಲೇಷಣೆಯ ಕುರಿತು ಉಪನ್ಯಾಸ ನೀಡಿದರು‌.

ಇದೇ ಸಂದರ್ಭದಲ್ಲಿ IQAC ಸಂಯೋಜಕರಾದ ಡಾ. ಬಿ.ಆರ್. ಗಂಗಾಧರಯ್ಯ, ವಿಭಾಗದ ಮುಖ್ಯಸ್ಥ ಪ್ರೊ. ಸತೀಶ್ ಕುಮಾರ್, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರಾಜ್ ಕುಮಾರ್, ಪ್ರಾಧ್ಯಾಪಕರಾದ ಪ್ರೊ. ಸತೀಶ್ ಜೋಗಾ, ಪ್ರೊ. ಮುನಿರಾಜ್, ಹಾಗೂ ಡಾ. ರವಿಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

6 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

16 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

17 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

22 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

23 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago