ರಾಜ್ಯಶಾಸ್ತ್ರ ಕೆ-ಸೆಟ್ /ನೆಟ್ ಕಾರ್ಯಾಗಾರ: ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈ-  ಪ್ರಾಧ್ಯಾಪಕ ಡಾ.ಸುರೇಂದ್ರ ಕುಮಾರ್

ದೊಡ್ಡಬಳ್ಳಾಪುರ: ಯಾವ ಪರೀಕ್ಷೆಯೂ ಅಸಾಧ್ಯವಲ್ಲ. ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈಗಳು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕುಮಾರ್ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಕೇಂದ್ರ ಹಾಗೂ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆ-ಸೆಟ್ /ನೆಟ್ ರಾಜ್ಯಶಾಸ್ತ್ರ ಪತ್ರಿಕೆಯ ಕಾರ್ಯಾಗಾರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು, ದೊಡ್ಡ ಕನಸುಗಳನ್ನು ಇಟ್ಟುಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಆಸಕ್ತಿಯಿಂದ, ಪ್ರೀತಿಯಿಂದ ಮತ್ತು ಕೌತುಕದಿಂದ ಓದಿದರೆ ಅದೇ ನಿಮ್ಮ ಶಕ್ತಿ ಆಗುತ್ತದೆ. ಕೆ-ಸೆಟ್ ಅಥವಾ ನೆಟ್ ಪರೀಕ್ಷೆಗಳು ಕೇವಲ ಒಂದು ಪ್ರಮಾಣ ಪತ್ರವಲ್ಲ , ಅದು ನಿಮ್ಮ ಶೈಕ್ಷಣಿಕ ಪಯಣದಲ್ಲಿ ನಿಜವಾದ ಜ್ಞಾನಪರಿಚಯದ ಹಂತವಾಗಿದೆ.  ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಶಾಸ್ತ್ರವು ಕೇವಲ ರಾಜಕೀಯವನ್ನು ತಿಳಿಸುವ ವಿಷಯವಲ್ಲ; ಅದು ಸಮಾಜದ ಬದಲಾವಣೆಯ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಿಂದ ಪಡೆಯುವ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಪ್ರಾಧ್ಯಾಪಕ ಶ್ರೀಕಾಂತ್ ಹಂದ್ರಾಳ, ಡಾ. ಈರಣ್ಣ ಅವರು ಭಾಗವಹಿಸಿ, ಕೆ-ಸೆಟ್ ಮತ್ತು ನೆಟ್ ಪರೀಕ್ಷೆಗಳ ಪಠ್ಯಕ್ರಮ, ತಯಾರಿ ವಿಧಾನ ಹಾಗೂ ಪಠ್ಯಕ್ರಮದ ವಿಶ್ಲೇಷಣೆಯ ಕುರಿತು ಉಪನ್ಯಾಸ ನೀಡಿದರು‌.

ಇದೇ ಸಂದರ್ಭದಲ್ಲಿ IQAC ಸಂಯೋಜಕರಾದ ಡಾ. ಬಿ.ಆರ್. ಗಂಗಾಧರಯ್ಯ, ವಿಭಾಗದ ಮುಖ್ಯಸ್ಥ ಪ್ರೊ. ಸತೀಶ್ ಕುಮಾರ್, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರಾಜ್ ಕುಮಾರ್, ಪ್ರಾಧ್ಯಾಪಕರಾದ ಪ್ರೊ. ಸತೀಶ್ ಜೋಗಾ, ಪ್ರೊ. ಮುನಿರಾಜ್, ಹಾಗೂ ಡಾ. ರವಿಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

20 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago