ದೊಡ್ಡಬಳ್ಳಾಪುರ: ಯಾವ ಪರೀಕ್ಷೆಯೂ ಅಸಾಧ್ಯವಲ್ಲ. ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈಗಳು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕುಮಾರ್ ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಕೇಂದ್ರ ಹಾಗೂ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆ-ಸೆಟ್ /ನೆಟ್ ರಾಜ್ಯಶಾಸ್ತ್ರ ಪತ್ರಿಕೆಯ ಕಾರ್ಯಾಗಾರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು, ದೊಡ್ಡ ಕನಸುಗಳನ್ನು ಇಟ್ಟುಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಆಸಕ್ತಿಯಿಂದ, ಪ್ರೀತಿಯಿಂದ ಮತ್ತು ಕೌತುಕದಿಂದ ಓದಿದರೆ ಅದೇ ನಿಮ್ಮ ಶಕ್ತಿ ಆಗುತ್ತದೆ. ಕೆ-ಸೆಟ್ ಅಥವಾ ನೆಟ್ ಪರೀಕ್ಷೆಗಳು ಕೇವಲ ಒಂದು ಪ್ರಮಾಣ ಪತ್ರವಲ್ಲ , ಅದು ನಿಮ್ಮ ಶೈಕ್ಷಣಿಕ ಪಯಣದಲ್ಲಿ ನಿಜವಾದ ಜ್ಞಾನಪರಿಚಯದ ಹಂತವಾಗಿದೆ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಶಾಸ್ತ್ರವು ಕೇವಲ ರಾಜಕೀಯವನ್ನು ತಿಳಿಸುವ ವಿಷಯವಲ್ಲ; ಅದು ಸಮಾಜದ ಬದಲಾವಣೆಯ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಿಂದ ಪಡೆಯುವ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಪ್ರಾಧ್ಯಾಪಕ ಶ್ರೀಕಾಂತ್ ಹಂದ್ರಾಳ, ಡಾ. ಈರಣ್ಣ ಅವರು ಭಾಗವಹಿಸಿ, ಕೆ-ಸೆಟ್ ಮತ್ತು ನೆಟ್ ಪರೀಕ್ಷೆಗಳ ಪಠ್ಯಕ್ರಮ, ತಯಾರಿ ವಿಧಾನ ಹಾಗೂ ಪಠ್ಯಕ್ರಮದ ವಿಶ್ಲೇಷಣೆಯ ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ IQAC ಸಂಯೋಜಕರಾದ ಡಾ. ಬಿ.ಆರ್. ಗಂಗಾಧರಯ್ಯ, ವಿಭಾಗದ ಮುಖ್ಯಸ್ಥ ಪ್ರೊ. ಸತೀಶ್ ಕುಮಾರ್, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರಾಜ್ ಕುಮಾರ್, ಪ್ರಾಧ್ಯಾಪಕರಾದ ಪ್ರೊ. ಸತೀಶ್ ಜೋಗಾ, ಪ್ರೊ. ಮುನಿರಾಜ್, ಹಾಗೂ ಡಾ. ರವಿಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…