ದೊಡ್ಡಬಳ್ಳಾಪುರ: ಯಾವ ಪರೀಕ್ಷೆಯೂ ಅಸಾಧ್ಯವಲ್ಲ. ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈಗಳು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕುಮಾರ್ ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಕೇಂದ್ರ ಹಾಗೂ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆ-ಸೆಟ್ /ನೆಟ್ ರಾಜ್ಯಶಾಸ್ತ್ರ ಪತ್ರಿಕೆಯ ಕಾರ್ಯಾಗಾರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು, ದೊಡ್ಡ ಕನಸುಗಳನ್ನು ಇಟ್ಟುಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಆಸಕ್ತಿಯಿಂದ, ಪ್ರೀತಿಯಿಂದ ಮತ್ತು ಕೌತುಕದಿಂದ ಓದಿದರೆ ಅದೇ ನಿಮ್ಮ ಶಕ್ತಿ ಆಗುತ್ತದೆ. ಕೆ-ಸೆಟ್ ಅಥವಾ ನೆಟ್ ಪರೀಕ್ಷೆಗಳು ಕೇವಲ ಒಂದು ಪ್ರಮಾಣ ಪತ್ರವಲ್ಲ , ಅದು ನಿಮ್ಮ ಶೈಕ್ಷಣಿಕ ಪಯಣದಲ್ಲಿ ನಿಜವಾದ ಜ್ಞಾನಪರಿಚಯದ ಹಂತವಾಗಿದೆ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಶಾಸ್ತ್ರವು ಕೇವಲ ರಾಜಕೀಯವನ್ನು ತಿಳಿಸುವ ವಿಷಯವಲ್ಲ; ಅದು ಸಮಾಜದ ಬದಲಾವಣೆಯ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಿಂದ ಪಡೆಯುವ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಪ್ರಾಧ್ಯಾಪಕ ಶ್ರೀಕಾಂತ್ ಹಂದ್ರಾಳ, ಡಾ. ಈರಣ್ಣ ಅವರು ಭಾಗವಹಿಸಿ, ಕೆ-ಸೆಟ್ ಮತ್ತು ನೆಟ್ ಪರೀಕ್ಷೆಗಳ ಪಠ್ಯಕ್ರಮ, ತಯಾರಿ ವಿಧಾನ ಹಾಗೂ ಪಠ್ಯಕ್ರಮದ ವಿಶ್ಲೇಷಣೆಯ ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ IQAC ಸಂಯೋಜಕರಾದ ಡಾ. ಬಿ.ಆರ್. ಗಂಗಾಧರಯ್ಯ, ವಿಭಾಗದ ಮುಖ್ಯಸ್ಥ ಪ್ರೊ. ಸತೀಶ್ ಕುಮಾರ್, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರಾಜ್ ಕುಮಾರ್, ಪ್ರಾಧ್ಯಾಪಕರಾದ ಪ್ರೊ. ಸತೀಶ್ ಜೋಗಾ, ಪ್ರೊ. ಮುನಿರಾಜ್, ಹಾಗೂ ಡಾ. ರವಿಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…