ದೊಡ್ಡಬಳ್ಳಾಪುರ: ಯಾವ ಪರೀಕ್ಷೆಯೂ ಅಸಾಧ್ಯವಲ್ಲ. ಕ್ರಮಬದ್ಧವಾದ ಓದು, ಸಮಯನಿಷ್ಠೆ ಹಾಗೂ ಜ್ಞಾನ ವೃದ್ಧಿಯು ಯಶಸ್ಸಿನ ಕೀಲಿಕೈಗಳು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕುಮಾರ್ ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಕೇಂದ್ರ ಹಾಗೂ ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆ-ಸೆಟ್ /ನೆಟ್ ರಾಜ್ಯಶಾಸ್ತ್ರ ಪತ್ರಿಕೆಯ ಕಾರ್ಯಾಗಾರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು, ದೊಡ್ಡ ಕನಸುಗಳನ್ನು ಇಟ್ಟುಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಆಸಕ್ತಿಯಿಂದ, ಪ್ರೀತಿಯಿಂದ ಮತ್ತು ಕೌತುಕದಿಂದ ಓದಿದರೆ ಅದೇ ನಿಮ್ಮ ಶಕ್ತಿ ಆಗುತ್ತದೆ. ಕೆ-ಸೆಟ್ ಅಥವಾ ನೆಟ್ ಪರೀಕ್ಷೆಗಳು ಕೇವಲ ಒಂದು ಪ್ರಮಾಣ ಪತ್ರವಲ್ಲ , ಅದು ನಿಮ್ಮ ಶೈಕ್ಷಣಿಕ ಪಯಣದಲ್ಲಿ ನಿಜವಾದ ಜ್ಞಾನಪರಿಚಯದ ಹಂತವಾಗಿದೆ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಶಾಸ್ತ್ರವು ಕೇವಲ ರಾಜಕೀಯವನ್ನು ತಿಳಿಸುವ ವಿಷಯವಲ್ಲ; ಅದು ಸಮಾಜದ ಬದಲಾವಣೆಯ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಿಂದ ಪಡೆಯುವ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಪ್ರಾಧ್ಯಾಪಕ ಶ್ರೀಕಾಂತ್ ಹಂದ್ರಾಳ, ಡಾ. ಈರಣ್ಣ ಅವರು ಭಾಗವಹಿಸಿ, ಕೆ-ಸೆಟ್ ಮತ್ತು ನೆಟ್ ಪರೀಕ್ಷೆಗಳ ಪಠ್ಯಕ್ರಮ, ತಯಾರಿ ವಿಧಾನ ಹಾಗೂ ಪಠ್ಯಕ್ರಮದ ವಿಶ್ಲೇಷಣೆಯ ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ IQAC ಸಂಯೋಜಕರಾದ ಡಾ. ಬಿ.ಆರ್. ಗಂಗಾಧರಯ್ಯ, ವಿಭಾಗದ ಮುಖ್ಯಸ್ಥ ಪ್ರೊ. ಸತೀಶ್ ಕುಮಾರ್, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರಾಜ್ ಕುಮಾರ್, ಪ್ರಾಧ್ಯಾಪಕರಾದ ಪ್ರೊ. ಸತೀಶ್ ಜೋಗಾ, ಪ್ರೊ. ಮುನಿರಾಜ್, ಹಾಗೂ ಡಾ. ರವಿಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…