ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ ಪ್ರೊ. ಎಂ. ನಾಗರಾಜ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ರಾಜ್ಯಸಭೆಗೆ ಒಬಿಸಿ ಸಮುದಾಯದ ನಾಯಕ ಪ್ರೊ. ಎಂ. ನಾಗರಾಜ ಅವರಿಗೆ ಅವಕಾಶ ಕಲ್ಪಿಸಿದೆ. ಸಂಘಟನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಸುವ ಮೂಲಕ ಪಕ್ಷವು ಸಂಘಟನಾ ನಿಷ್ಠೆಗೆ ಮನ್ನಣೆ ನೀಡಿದೆ.

ಇದೇ ವೇಳೆ, ಎನ್‌ಡಿಎ ಮೈತ್ರಿಕೂಟದ ಅಂಗಪಕ್ಷವಾದ ಜೆಡಿಎಸ್ ಗೆ ಬಿಜೆಪಿ ನಿರ್ಧಾರ ಭಾರಿ ಆಘಾತ ನೀಡಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಮತ್ತೊಮ್ಮೆ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರೀಕ್ಷೆ ಜೆಡಿಎಸ್ ವಲಯದಲ್ಲಿ ವ್ಯಕ್ತವಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ವಯಸ್ಸು ಹಾಗೂ ಆರೋಗ್ಯದ ಅಂಶಗಳನ್ನು ಪರಿಗಣಿಸಿ ಅವರಿಗೆ ಟಿಕೆಟ್ ನೀಡದಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಈ ಹಿಂದೆ ಹಲವು ಬಾರಿ, ‘ರಾಜ್ಯಸಭಾ ಟಿಕೆಟ್ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ’ ಎಂದು ಹೇಳಿದ್ದರು. ಆದರೂ, ಮೈತ್ರಿಕೂಟದ ಬೆಂಬಲದೊಂದಿಗೆ ದೇವೇಗೌಡರ ಮರು ಆಯ್ಕೆ ಸಾಧ್ಯವಾಗಬಹುದು ಎಂಬ ಲೆಕ್ಕಾಚಾರ ಜೆಡಿಎಸ್‌ನಲ್ಲಿ ಇತ್ತು. ಬಿಜೆಪಿ ಹೊಸ ಮುಖಕ್ಕೆ ಅವಕಾಶ ನೀಡಿರುವುದರಿಂದ ಆ ನಿರೀಕ್ಷೆ ಹುಸಿಯಾಗಿದೆ.

ಇನ್ನೊಂದೆಡೆ, ರಾಜ್ಯಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ವಿವಿಧ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯೊಂದಿಗೆ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣಾ ರಾಜಕೀಯ ಮತ್ತಷ್ಟು ಚುರುಕುಗೊಂಡಿದ್ದು, ದೇವೇಗೌಡರಿಗೆ ಟಿಕೆಟ್ ಕೈತಪ್ಪಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

2 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

4 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

18 hours ago