Categories: ಹವಾಮಾನ

ರಾಜ್ಯಾದ್ಯಂತ ಭಾರಿ ಮಳೆ: ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಸರ್ಕಾರ

ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಹೇಳಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು:

* ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

* ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.

* ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

* ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

8 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

10 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

22 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago