ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಹೇಳಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು:
* ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
* ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.
* ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
* ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…