ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಹೇಳಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು:
* ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
* ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.
* ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
* ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…