ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಹೇಳಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು:
* ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
* ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.
* ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
* ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…