ರಾಜ್ಯಾದ್ಯಂತ ಲೋಕಾಯುಕ್ತದಲ್ಲಿ 25 ಸಾವಿರ ಪ್ರಕರಣಗಳು ಬಾಕಿ- ಸುಮಾರು 10 ಸಾವಿರ ಸುಳ್ಳು ಕೇಸ್‌ಗಳ ದಾಖಲು-ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪಲೋಕಾಯುಕ್ತ ಬಿ.ವೀರಪ್ಪ ಸೂಚನೆ

ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೇವನಹಳ್ಳಿ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಲೋಕಾಯುಕ್ತದಲ್ಲಿ 25 ಸಾವಿರ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ಇತ್ಯರ್ಥ ಮಾಡಲು ಕ್ರಮವಹಿಸಲಾಗಿದೆ. ಇದರಲ್ಲಿ ಸುಮಾರು 10 ಸಾವಿರ ಸುಳ್ಳು ಕೇಸ್‌ಗಳು ಇವೆ. ಯಾವುದೇ ಕೇಸ್ ಬಂದರೂ ಅದನ್ನು ಕ್ರಮ ಬದ್ದವಾಗಿ ವಿಲೇವಾರಿ ಮಾಡಬೇಕು. ಸುಳ್ಳು ಪ್ರಕರಣಗಳಿಂದ ಉಳಿದ ಪ್ರಕರಣಗಳನ್ನು ಕೂಡ ಇತ್ಯರ್ಥ ಮಾಡುವುದು ಸವಾಲಿನ ಕೆಲಸವಾಗುತ್ತಿದೆ. ಇದರಿಂದ ಯಾವ ಪ್ರಕರಣಗಳಲ್ಲಿ ಸತ್ಯತೆ ಇದೆಯೋ ಅಂತಹ ಪ್ರಕರಣಗಳನ್ನು ಮಾತ್ರ ದಾಖಲಿಸಬೇಕು. ಇಲ್ಲವಾದಲ್ಲಿ ಸುಳ್ಳು ಕೇಸ್ ಹಾಕಿದ ಅರ್ಜಿದಾರರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಬಹುದು ಎಂದರು.

ಅಧಿಕಾರಿಗಳಿಗೆ ಸರ್ಕಾರಿ ಸೇವೆ ಸಿಗುವುದು ಸಾರ್ವಜನಿಕರ ಸೇವೆಗೆ ಒಂದು ಉತ್ತಮ ವೇದಿಕೆ, ಸಾರ್ವಜನಿಕರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಮುಗಿಸಬೇಕು. ಅಧಿಕಾರಿವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮರಂಗ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿದೆ. ಅಧಿಕಾರಿಗಳು ಇದನ್ನು ಸರಿಪಡಿಸಬೇಕು. ಅಧಿಕಾರದ ಜತೆಗೆ ಸಂಸ್ಕಾರ ಕೂಡ ಇರಬೇಕು. ಅನ್ಯಾಯ, ಆಕ್ರಮದಿಂದ ಮಾಡಿದ ಆಸ್ತಿಯಿಂದ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದರು.

*ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ*

ಕೆಲವೆಡೆ ಲೋಕಾಯುಕ್ತ ದಾಳಿ ನಡೆಸಿದ ಸಂದರ್ಭದಲ್ಲಿ ಬೆದರಿಕೆ ಹಾಕುವ ಕೆಲಸವಾಗುತ್ತದೆ. ಆದರೆ ಯಾರ ಬೆದರಿಕೆಗೂ ಬಗ್ಗಲ್ಲ. ನ್ಯಾಯಯುತವಾಗಿ ಎಲ್ಲವನ್ನೂ ವಿಚಾರಣೆ ನಡೆಸಲಾಗುತ್ತದೆ ಎಂದರು.

*ವಿಐ, ಆರ್ ಐ ಗಳ ಮಾಹಿತಿ ನೀಡಲು ಸೂಚನೆ*

ಕೆಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರ ಕುಟುಂಬ ವಿವರ, ಆಸ್ತಿ ವಿವರ, ಅವಲಂಬಿತ ಸದಸ್ಯರ ವಿವರವನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ಒಂದು ತಿಂಗಳ ಒಳಗಾಗಿ ವರದಿ ನೀಡಿ ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.

*ಮಾಜಿ ಸೈನಿಕನಿಗೆ ಸೂಕ್ತ ನ್ಯಾಯ ಒದಗಿಸಲು ಸೂಚನೆ*

ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ಮಾಜಿ ಸೈನಿಕನ ಎರಡು ಎಕರೆ ಜಮೀನಿಗೆ ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಲು ವಿಳಂಬವಾಗುತ್ತಿದೆ. ಈ ಪ್ರಕರಣದಲ್ಲಿ ಆ ಜಮೀನಿನ ಮೇಲೆ ಮಾಲಿಕರು ಪೋಸಿಶನ್ ಲಿ ಇದಾರ ಇಲ್ಲವಾ ಎಂಬುದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

*ಶಾಲಾ ಭೂಮಿ ಒತ್ತುವರಿ ತೆರವಿಗೆ‌ 2 ತಿಂಗಳ ಗಡುವು*

ಸರ್ಕಾರಿ ಶಾಲೆಯ ಕಾಂಪೋಂಡ್ ಕೆಡವುದರೊಂದಿಗೆ ಶಾಲಾ ಜಮೀನು ಒತ್ತುವರಿ ತೆರವುಗೊಳಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ದ ಗರಂ ಆದ ಉಪ ಲೋಕಾಯುಕ್ತರು, ಎಲ್ಲವನ್ನೂ ನೋಡಿಕೊಂಡು ಸುಮ್ಮ ನಿರುವ ಎಸ್.ಡಿ.ಎಂ.ಸಿ ಸಮಿತಿ, ಡಿಡಿಪಿಐ, ಬಿಇಒ ಹಾಗೂ ಶಾಲಾ ಮುಖ್ಯೋಪಾಧ್ಯಾಯ ರ ವಿರುದ್ದ ಪ್ರಕರಣ ದಾಖಲಿಸಿ ಹಾಗೂ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ 2 ತಿಂಗಳೊಳಗಾಗಿ ಶಾಲಾ ಜಾಗವನ್ನು ಒತ್ತುವರಿ ತೆರವುಗೊಳಿಸಿ ಹದ್ದುಬಸ್ತು ಮಾಡಲು ದೇವನಹಳ್ಳಿ ತಹಶೀಲ್ದಾರರಿಗೆ ಸೂಚಿಸಿದರು.

*ಮಾಲೀಕನ ಅರಿವಿಗೆ‌ಬಾರದಂತೆ ಆರ್ ಟಿ ಒ ದಿಂದ ವಾಹನ ಹಸ್ತಾಂತರ*

ಮಾಲೀಕರಿಂದ ದ್ವಿಚಕ್ರ ವಾಹನ ಕೊಂಡೊಯ್ದಿದ್ದ ವ್ಯಕ್ತಿ ತನ್ನ ಹೆಸರಿಗೆ ವಾಹನ ನೊಂದಾಯಿಸಿಕೊಳ್ಳಲು ದೇವನಹಳ್ಳಿ ಆರ್ ಟಿಒ ಕಚೇರಿ ಹೇಗೆ ಸಹಕರಿಸಿತು ಎಂದು ಆಶ್ಚರ್ಯ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ವಾಹನ ಮಾಲೀಕರ ಸಹಿ ಹಾಗೂ ಆಧಾರ್ ಕಾರ್ಡ್ ಪಡೆಯದೇ ಹೇಗೆ ನೊಂದಣಿ ಮಾಡಿದಿರಿ ತಕ್ಷಣ ಆರ್ ಟಿ ಓ ವಿರುದ್ದ ದೂರು ದಾಖಲಿಸಿ ಎಂದರು. ಎಂದಾಗ ಆರ್.ಟಿ.ಓ ಅಧಿಕಾರಿಗಳು ವಾಪಸ್ ಮೂಲ ಮಾಲೀಕರಿಗೆ ದಾಖಲೆ ವರ್ಗಾಯಿಸಲಾಗುವುದೆಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶ್ರೀ ಶೈಲ್ ಭೀಮಸೇನ ಬಗಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

Ramesh Babu

Journalist

Recent Posts

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

2 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

13 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

15 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

17 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

18 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

1 day ago