ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.
ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…