ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.
ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…