ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ನಿವೃತ್ತಿ: ಹಂಗಾಮಿ ಡಿಜಿ ಐಜಿಪಿಯಾಗಿ ಡಾ.ಎಂ.ಎ.ಸಲೀಂ ನೇಮಕ

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.

ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago