ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.
ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…