ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.
ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…