ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆ, 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಡಿಜಿಐಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ.ಎಂ.ಎ. ಸಲೀಂ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ಸರಕಾರವು ಸಲೀಂ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಒಲವು ಹೊಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ, ಸೇವಾ ಜೇಷ್ಠತೆಯ ನಿಯಮಗಳು ಇದಕ್ಕೆ ಅಡ್ಡಿಯಾಗಿವೆ. ಡಾ.ಎಂ.ಎ ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿರುವುದರಿಂದ, ಅವರನ್ನು ನೇಮಕ ಮಾಡಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದೂ ಸರಕಾರದ ಚಿಂತೆಯಾಗಿದೆ.
ಈ ನಡುವೆ, ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿಪಿಯಾಗಿ ನೇಮಿಸುವ ಮೂಲಕ ರಾಜ್ಯ ಸರಕಾರವು ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಡಿಜಿ ಐಜಿಪಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…