Categories: ರಾಜ್ಯ

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಸಿಬಿಐ ನಿರ್ದೇಶಕರಾಗಿ ನೇಮಕ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.

ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋಧ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1986 ರ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿರುವ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷವಿದೆ.

ಪ್ರಸ್ತುತ ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಭೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಕ್ತಾಯಗೊಳ್ಳಲಿದೆ. 1985 ರ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸುಭೋಧ್ ಕುಮಾರ್ ಅವರು, 2021, ಮೇ 26 ರಂದು ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಆಯ್ಕೆ ಹೇಗೆ..?

ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ನಿಗದಿತ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.

ಕೇಂದ್ರೀಯ ತನಿಖಾ ದಳ (CBI )ಎಂಬುದು ಭಾರತದ ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಅಪರಾಧದ ತನಿಖಾ ಘಟಕವಾಗಿ, ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿ ಮತ್ತು ಗುಪ್ತಚರ ಸಂಸ್ಥೆಯಾಗಿ ಅದು ಸೇವೆ ಸಲ್ಲಿಸುತ್ತದೆ. 1963 ರ ಏಪ್ರಿಲ್‌ 1 ರಂದು ಇದು ಸ್ಥಾಪಿಸಲ್ಪಟ್ಟಿತು. “ದುಡಿಮೆ, ನಿಷ್ಪಕ್ಷಪಾತತೆ, ಸಮಗ್ರತೆ” ಎಂಬುದು ಇದರ ಧ್ಯೇಯವಾಕ್ಯವಾಗಿದೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

13 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago