ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.
ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋಧ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1986 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷವಿದೆ.
ಪ್ರಸ್ತುತ ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಭೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಕ್ತಾಯಗೊಳ್ಳಲಿದೆ. 1985 ರ ಮಹಾರಾಷ್ಟ್ರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸುಭೋಧ್ ಕುಮಾರ್ ಅವರು, 2021, ಮೇ 26 ರಂದು ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಆಯ್ಕೆ ಹೇಗೆ..?
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ನಿಗದಿತ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಕೇಂದ್ರೀಯ ತನಿಖಾ ದಳ (CBI )ಎಂಬುದು ಭಾರತದ ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಅಪರಾಧದ ತನಿಖಾ ಘಟಕವಾಗಿ, ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿ ಮತ್ತು ಗುಪ್ತಚರ ಸಂಸ್ಥೆಯಾಗಿ ಅದು ಸೇವೆ ಸಲ್ಲಿಸುತ್ತದೆ. 1963 ರ ಏಪ್ರಿಲ್ 1 ರಂದು ಇದು ಸ್ಥಾಪಿಸಲ್ಪಟ್ಟಿತು. “ದುಡಿಮೆ, ನಿಷ್ಪಕ್ಷಪಾತತೆ, ಸಮಗ್ರತೆ” ಎಂಬುದು ಇದರ ಧ್ಯೇಯವಾಕ್ಯವಾಗಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…