ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.
ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋಧ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1986 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷವಿದೆ.
ಪ್ರಸ್ತುತ ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಭೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಕ್ತಾಯಗೊಳ್ಳಲಿದೆ. 1985 ರ ಮಹಾರಾಷ್ಟ್ರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸುಭೋಧ್ ಕುಮಾರ್ ಅವರು, 2021, ಮೇ 26 ರಂದು ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಆಯ್ಕೆ ಹೇಗೆ..?
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ನಿಗದಿತ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಕೇಂದ್ರೀಯ ತನಿಖಾ ದಳ (CBI )ಎಂಬುದು ಭಾರತದ ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಅಪರಾಧದ ತನಿಖಾ ಘಟಕವಾಗಿ, ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿ ಮತ್ತು ಗುಪ್ತಚರ ಸಂಸ್ಥೆಯಾಗಿ ಅದು ಸೇವೆ ಸಲ್ಲಿಸುತ್ತದೆ. 1963 ರ ಏಪ್ರಿಲ್ 1 ರಂದು ಇದು ಸ್ಥಾಪಿಸಲ್ಪಟ್ಟಿತು. “ದುಡಿಮೆ, ನಿಷ್ಪಕ್ಷಪಾತತೆ, ಸಮಗ್ರತೆ” ಎಂಬುದು ಇದರ ಧ್ಯೇಯವಾಕ್ಯವಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…