ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ: ದೊಡ್ಡಬಳ್ಳಾಪುರದಲ್ಲಿ 20 ಎಕರೆ ಪ್ರದೇಶದಲ್ಲಿ ಜಿಲ್ಲಾ ಕ್ರೀಡಾಂಗಣ: 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ

ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದರು.

2025-26ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿಯ 20 ಎಕರೆ ಪ್ರದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆ ಉತ್ತೇಜನಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

6 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

6 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

19 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago