Categories: ಕೋಲಾರ

ರಾಜ್ಯ ಬಜೆಟ್ ನಲ್ಲಿ ಮಾವು ಬೆಳಗಾರರ ಸಮಸ್ಯೆಗಳಿಗೆ ಒತ್ತು ನೀಡುವಂತೆ ರೈತ ಸಂಘ ಮನವಿ

ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್‌ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.

ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‌ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷರಾದ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್‌ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

56 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago