Categories: ಕೋಲಾರ

ರಾಜ್ಯ ಬಜೆಟ್ ನಲ್ಲಿ ಮಾವು ಬೆಳಗಾರರ ಸಮಸ್ಯೆಗಳಿಗೆ ಒತ್ತು ನೀಡುವಂತೆ ರೈತ ಸಂಘ ಮನವಿ

ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್‌ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.

ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‌ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷರಾದ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್‌ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago