Categories: ಕೋಲಾರ

ರಾಜ್ಯ ಬಜೆಟ್ ನಲ್ಲಿ ಮಾವು ಬೆಳಗಾರರ ಸಮಸ್ಯೆಗಳಿಗೆ ಒತ್ತು ನೀಡುವಂತೆ ರೈತ ಸಂಘ ಮನವಿ

ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್‌ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.

ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‌ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷರಾದ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್‌ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

11 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

23 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

24 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago