Categories: ಕೋಲಾರ

ರಾಜ್ಯ ಬಜೆಟ್ ನಲ್ಲಿ ಮಾವು ಬೆಳಗಾರರ ಸಮಸ್ಯೆಗಳಿಗೆ ಒತ್ತು ನೀಡುವಂತೆ ರೈತ ಸಂಘ ಮನವಿ

ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್‌ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.

ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‌ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷರಾದ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್‌ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

8 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

8 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

8 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

9 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

10 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

14 hours ago