ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.
ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.
ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
ತಾಲ್ಲೂಕು ಅಧ್ಯಕ್ಷರಾದ ತರ್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…