ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ: ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು- ಈ ನಿರ್ಧಾರ ತಪ್ಪು- ಸರಿ ಬಗ್ಗೆ ಚರ್ಚೆ ಮಾಡಬಾರದು- ಮಾಜಿ ಸಚಿವ ಶ್ರೀರಾಮುಲು

ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆರ್.ಶ್ರೀರಾಮುಲು, ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು. ಎಲ್ಲರಿಗೂ ಎಲ್ಲಾ ಸಮಯದಲ್ಲು ಸಮಾಧಾನ ಮಾಡಲು ಆಗಲ್ಲ. ಇಂದು ತೆಗೆದುಕೊಂಡ ನಿರ್ಧಾರ ತಪ್ಪಾ ಸರಿಯಾ ಅನ್ನೋದು ಚರ್ಚೆ ಮಾಡಬಾರದು. ಒಮ್ಮೆ ನಮ್ಮ‌ ಹಿರಿಯ ನಾಯಕರು ತೀರ್ಮಾನ ತೆಗೆದುಕೊಂಡ ಮೇಲೆ ಒಟ್ಟಾಗಿ ಕೆಲಸ ಮಾಡಬೇಕು. ವಿಜಯೇಂದ್ರ ಅವರಿಗೆ ಸಂಪೂರ್ಣ ಸಹಕಾರ ನೀಡಿ ಒಗ್ಗಟ್ಟಾಗಿ ಹೋಗುವ ಕೆಲಸ ನಾವೆಲ್ಲ ಮಾಡುತ್ತೇವೆ ಎಂದರು.

ನಮ್ಮ ನಾಯಕರ ಆದೇಶದ ಮೇರೆಗೆ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಘೋಷಣೆಯಾಗಿದೆ. ರಾಜ್ಯದ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಮಾಜಿ ಸಚಿವ ಆರ್.ಶ್ರೀರಾಮುಲು ಪ್ರತಿಕ್ರಿಯೆ ನೀಡಿದರು.

ವಿಜಯೇಂದ್ರ ಅವರನ್ನ ಆಯ್ಕೆ ಮಾಡುವ ಮೂಲಕ ಹೈಕಮಾಂಡ್ ರಾಜ್ಯದ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಅವರಂತೆ ವಿಜಯೇಂದ್ರ ಅವರು ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ. ಕಳೆದ ಚುನಾವಣೆಯಲ್ಲಿ ನಮ್ಮಂತೆ ಸಾಕಷ್ಟು ಜನ ಸೋತಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅವರು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago