ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ: ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು- ಈ ನಿರ್ಧಾರ ತಪ್ಪು- ಸರಿ ಬಗ್ಗೆ ಚರ್ಚೆ ಮಾಡಬಾರದು- ಮಾಜಿ ಸಚಿವ ಶ್ರೀರಾಮುಲು

ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆರ್.ಶ್ರೀರಾಮುಲು, ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು. ಎಲ್ಲರಿಗೂ ಎಲ್ಲಾ ಸಮಯದಲ್ಲು ಸಮಾಧಾನ ಮಾಡಲು ಆಗಲ್ಲ. ಇಂದು ತೆಗೆದುಕೊಂಡ ನಿರ್ಧಾರ ತಪ್ಪಾ ಸರಿಯಾ ಅನ್ನೋದು ಚರ್ಚೆ ಮಾಡಬಾರದು. ಒಮ್ಮೆ ನಮ್ಮ‌ ಹಿರಿಯ ನಾಯಕರು ತೀರ್ಮಾನ ತೆಗೆದುಕೊಂಡ ಮೇಲೆ ಒಟ್ಟಾಗಿ ಕೆಲಸ ಮಾಡಬೇಕು. ವಿಜಯೇಂದ್ರ ಅವರಿಗೆ ಸಂಪೂರ್ಣ ಸಹಕಾರ ನೀಡಿ ಒಗ್ಗಟ್ಟಾಗಿ ಹೋಗುವ ಕೆಲಸ ನಾವೆಲ್ಲ ಮಾಡುತ್ತೇವೆ ಎಂದರು.

ನಮ್ಮ ನಾಯಕರ ಆದೇಶದ ಮೇರೆಗೆ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಘೋಷಣೆಯಾಗಿದೆ. ರಾಜ್ಯದ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಮಾಜಿ ಸಚಿವ ಆರ್.ಶ್ರೀರಾಮುಲು ಪ್ರತಿಕ್ರಿಯೆ ನೀಡಿದರು.

ವಿಜಯೇಂದ್ರ ಅವರನ್ನ ಆಯ್ಕೆ ಮಾಡುವ ಮೂಲಕ ಹೈಕಮಾಂಡ್ ರಾಜ್ಯದ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಅವರಂತೆ ವಿಜಯೇಂದ್ರ ಅವರು ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ. ಕಳೆದ ಚುನಾವಣೆಯಲ್ಲಿ ನಮ್ಮಂತೆ ಸಾಕಷ್ಟು ಜನ ಸೋತಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅವರು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

4 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago