ಕರ್ನಾಟಕ ರಾಜ್ಯ ಸರ್ಕಾರ ಪ್ರತೀ ವರ್ಷದಂತೆ ಈ ವರ್ಷವೂ ಸಹ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ದಸರಾ ಕ್ರೀಡಾಕೂಟಕ್ಕೆ ದೊಡ್ಡಬಳ್ಳಾಪುರದ ಯೋಗ ಪ್ರತಿಭೆ ಜಿ.ಸಿ ಹೃತಿಕ್ ಆಯ್ಕೆ ಆಗಿದ್ದಾರೆ.
ಯೋಗ ಪ್ರತಿಭೆ ಜಿ.ಸಿ ಹೃತಿಕ್ ಅವರು ನಗರದ ಶ್ರೀ ಮಾರುತಿ ಯೋಗಾಸನ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದು ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿ.ಸಿ ಹೃತಿಕ್ ಅವರು ಶಿವಮೊಗ್ಗದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಯೋಗಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಹಾಗೂ ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದು ಈಗ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಪ್ರಥಮ ಸ್ಥಾನ ಗಳಿಸಿ ದೊಡ್ಡಬಳ್ಳಾಪುರಕ್ಕೆ ಹೆಮ್ಮೆ ತರುವಂತಾಗಲಿ ಎಂದು ಶ್ರೀ ಮಾರುತಿ ಯೋಗಾಸನ ಕೇಂದ್ರದ ತರಬೇತುದಾರ ರಘು.ಎಚ್.ಜಿ, ಸುಗುಣಶ್ರೀ ಹಾಗೂ ಇತರರು ಜಿ.ಸಿ ಹೃತಿಕ್ ಅವರಿಗೆ ಶುಭ ಹಾರೈಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…